ಎಂ.ಎಸ್. ನರಸಿಂಹಮೂರ್ತಿ / M.S.Narasimhamurthy
ಬೈಂಡಿಂಗ್ : ಪೇಪರ್ ಬ್ಯಾಕ್
Reference: ಡಾ. ಚಂದ್ರಶೇಖರ ಕಂಬಾರ
ಡಾ. ಚಂದ್ರಶೇಖರ ಕಂಬಾರ / Chandrashekar Kambara
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :128
ISBN :978-93-92230-03-5
ಪುಸ್ತಕದ ಸಂಖ್ಯೆ : 825
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
`ಪ್ರಸಿದ್ಧ ವಿಮರ್ಶಕರಾದ ಶ್ರೀ ಎಸ್ ಆರ್. ವಿಜಯಶಂಕರ ಅವರು ಹೀಗೆ ಹೇಳಿದ್ದಾರೆ
ಡಾ. ಚಂದ್ರಶೇಖರ ಕಂಬಾರರು ನಂಬಿಕೆಯಲ್ಲಿ ಆಸ್ತಿಕರು. ಕೊನೆಗೂ ಈ ಲೋಕದಲ್ಲಿ ಕೇಡಿನ,ದುಷ್ಟಶಕ್ತಿಗಳ ವಿರುದ್ಧ ಸಾತ್ವಿಕ ಶಕ್ತಿ ಗೆಲ್ಲುತ್ತದೆ ಎಂಬುದು ಅವರ ಪೂರ್ಣ ವಿಶ್ವಾಸ. ಆದರೆ,ಈ ವಿಶ್ವಾಸ ಆಧುನಿಕ ಬದುಕಿನ ಸಂಕೀರ್ಣ ಅನುಭವ, ಕೆಡುಕಿನ ಅಪರಿಮಿತ ಸಾಧ್ಯತೆಗಳಿಗೆ ಕುರುಡಾಗುವುದಿಲ್ಲ. ಸಾತ್ವಿಕ ಶಕ್ತಿಗಳ ಕೊನೆಯ ವಿಜಯದ ಮೆಟ್ಟಿಲೇರುವ ಮೊದಲು ಅನುಭವಿಸಬೇಕಾದ ಸೋಲುಗಳನ್ನು ಕಡೆಗಣಿಸುವುದಿಲ್ಲ. ಚರಿತ್ರೆ ಮತ್ತು ವರ್ತಮಾನದ ಮೌಲ್ಯಗಳ ಪರಸ್ಪರ ಸಂಘರ್ಷವನ್ನು ನಿರೂಪಿಸಲು ಡಾ. ಕಂಬಾರರು ಚಾಂದಬೀ ಸರಕಾರದ ಕಥೆಯಾಗಿ,ಮುಖ್ಯಮಂತ್ರಿಗಳಾಗಿದ್ದಾಗ ದೇವರಾಜ ಅರಸು ಅವರು ಭೂ ಮಸೂದೆ ಕಾಯಿದೆಯನ್ನು ಜಾರಿಗೆ ತಂದಾಗ ಉಂಟಾದ ಸಾಮಾಜಿಕ ಸ್ಥಿತ್ಯಂತರವನ್ನು ಬಳಸುತ್ತಾರೆ. ಬಲದೇವ ನಾಯಕ ಆ ತನಕ ಬೆಳೆದು ಬಂದ ಜಮೀನ್ದಾರೀ ಪದ್ದತಿಯ ಕೊನೆಯ ಕೊಂಡಿ. ಪ್ರೇಯಸಿಯಂತೆ ಆತನ ಮನೆಗೆದ್ದು ಪತ್ನಿಯಾದವಳು ಚಾಂದಬೀ.
"ಚಾಂದಬೀ ಸರಕಾರ" ಕಾದಂಬರಿ,ಸಮಕಾಲೀನತೆಯ ಸವಾಲುಗಳನ್ನು ಬದಲಾಗುವ ಚರಿತ್ರೆಯ ಸಂಕ್ರಮಣ ಸ್ಥಿತಿಯಲ್ಲಿ ಶೋಧಿಸುತ್ತದೆ.
ಭೂ ಮಸೂದೆಯ ಕಾಲದ ಅನುಭವದ ಬಗೆಗಿನ ಅಪರೂಪವಾದೊಂದು ಕಥಾನಕವಿದು.