ಇದೊಂದು ರೋಚಕ ಕಥೆ. ಕೇವಲ ರೋಚಕ ಕಥೆ ಮಾತ್ರವಲ್ಲ ಸತ್ಯಕಥೆ. ಲೇಖಕ ಸುರೇಶ ಸೋಮಪುರ ಸ್ವತಃ ಕರ್ಣ - ಪಿಶಾಚಿನಿಯನ್ನು ಸಾಕ್ಷಾತ್ಕಾರ ಮಾಡಿಕೊಳ್ಳಲು ಮನೆ-ಮಠ, ಹೆಂಡತಿ-ಮಕ್ಕಳು, ಬಂಧುಗಳು ಎಲ್ಲರನ್ನೂ ಬಿಟ್ಟು ದೀದಿ ಅಂಬಿಕಾದೇವಿಯ ಸಹಾಯದಿಂದ ಶ್ರೀ ಚೈತನ್ಯಾನಂದರನ್ನು ಭೇಟಿಯಾಗುತ್ತಾರೆ. ಅವರ ಮಾರ್ಗದರ್ಶನದಲ್ಲಿ ತಂತ್ರ - ಮಂತ್ರ, ಶವಸಾಧನೆ ಇತ್ಯಾದಿ ನಡೆಸುತ್ತಾರೆ. ಅಂತಿಮವಾಗಿ 'ಕರ್ಣ-ಪಿಶಾಚಿನಿ' ಅವರ ವಶವಾಗುತ್ತದೆ. 

 ಸುರೇಶ್ ಸೋಮಪುರ ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ಗಳಿಸಿದ ಚಮತ್ಕಾರಗಳನ್ನು ಮಾನವ ಕಲ್ಯಾಣಕ್ಕಾಗಿ ಪ್ರಯೋಗಿಸಲು ನಿರ್ಧರಿಸುತ್ತಾರೆ. ಮನುಷ್ಯ ತನ್ನ ಜೀವನವನ್ನು ಹೇಗೆ ಕಳೆಯಬೇಕೆಂದು ಪ್ರತಿಪಾದಿಸುತ್ತಾರೆ.

  ಆತ್ಮ-ಪರಮಾತ್ಮ, ಭೂತ-ಪ್ರೇತ, ಧರ್ಮ-ಅಧರ್ಮಗಳಿಗೆ ಹೆದರಿ ಬದುಕುವುದು ಸರಿಯಲ್ಲ, ಮನುಷ್ಯ, ಅಂಧಶ್ರದ್ಧೆಯಿಂದ ಹೊರ ಬರಬೇಕಿದೆ ಎನ್ನುತ್ತಾರೆ. ಬದುಕಲು ಹೊಸ ಮಾರ್ಗವನ್ನು ಕಂಡುಕೊಳ್ಳಲು ಇಲ್ಲಿಯ ಸತ್ಯಕತೆ ಪ್ರೇರಣೆ ನೀಡುತ್ತದೆ. 

" ಅಘೋರಿಗಳ ನಡುವೆ" ಕೃತಿಯ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿರುವ ದಿ|| ಸುರೇಶ್ ಸೋಮಪುರ ಅವರ ಮತ್ತೊಂದು ರೋಚಕ ನೈಜಕತೆ ನಿಮ್ಮ ಮುಂದಿದೆ . 

ಅನು:ಎಂ.ವಿ.ನಾಗರಾಜರಾವ್

16 other products in the same category:

Product added to compare.