ಡಾ. ಕೆ.ಎನ್. ಗಣೇಶಯ್ಯ / Dr. K.N. Ganeshayya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು: 88
ಪುಸ್ತಕದ ಸಂಖ್ಯೆ: 981
ISBN:978-93-48262-37-0
Reference: ದೀಪಾ ಜೋಶಿ
ದೀಪಾ ಜೋಶಿ / Deepa Joshi
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :336
ISBN :978-93-48262-61-5
ಪುಸ್ತಕದ ಸಂಖ್ಯೆ : 937
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ಕಳೆದ ಶತಮಾನದ ಪೂರ್ವಾರ್ಧದಲ್ಲಿ ಆರಂಭವಾಗಿ, ಉತ್ತರಾರ್ಧದಲ್ಲಿ ಕೊನೆಗೊಳ್ಳುವ ನಡುವಿನ ಸುಮಾರು ಐವತ್ತು ವರ್ಷಗಳ ಕಥಾ ಜಗತ್ತು ದೀಪಾ ಜೋಶಿಯವರ ಈ ಕಾದಂಬರಿಯಲ್ಲಿ ಅನಾವರಣಗೊಳ್ಳುತ್ತಾ ಹೋಗುವ ರೀತಿ ಅನನ್ಯವಾದುದು. ಉತ್ತರ ಕರ್ನಾಟಕದ ರಾಣೆಬೆನ್ನೂರು ಕೇಂದ್ರವಾಗುಳ್ಳ ಮಾಧ್ವ ವೈದಿಕ ಕುಟುಂಬವೊಂದರ ಬದುಕಿನ ಹೋರಾಟದ ಕಥೆ ಇಲ್ಲಿದೆ.
ಹುಚ್ಚಾಚಾರ್ರ ಸಾವಿನ ಸನ್ನಿವೇಶದಿಂದ ಆರಂಭವಾಗುವ ಈ ಕಥಾನಕವು, ಅವರ ಮಗ ಭುಜಂಗಾಚಾರ್ರು ಬದುಕಿನ ಏಳುಬೀಳುಗಳ ಹೋರಾಟದಲ್ಲಿ, ಸುದೀರ್ಘ ಬಾಳ ಯಾತ್ರೆಗಳಲ್ಲಿ, ತೀವ್ರ ಬಡತನ, ಸಾವು, ದುಃಖ, ಒದ್ದಾಟಗಳನ್ನು ಎದುರಿಸುತ್ತಾ ಆ ಕುಲುಮೆಯಲ್ಲಿ ಬೆಂದು ಮಾಗುತ್ತಾ ಎಂದೂ ಸಹನೆಯನ್ನು ಕಳೆದುಕೊಳ್ಳದೆ ಘನತೆಯಿಂದ ಬಾಳುತ್ತಲೇ ಸ್ಥಿತಪ್ರಜ್ಞ ಸ್ಥಿತಿಗೆ ತಲುಪುವ ಹಂತದಲ್ಲಿ ಅಂತ್ಯವಾಗುತ್ತದೆ.
ಕಳೆದು ಹೋದ ಕಾಲಘಟ್ಟವೊಂದನ್ನು ಪುನರ್ ಸೃಷ್ಟಿಸುವ ಕಾರ್ಯದಲ್ಲಿ ದೀಪಾ ಜೋಶಿಯವರು ತೋರಿದ ಸಂಯಮ, ಆ ಕಾಲದ ಶಾಸ್ತ್ರಗಳು, ರೀತಿ ರಿವಾಜುಗಳು, ಸಾಮಾಜಿಕ ಸ್ಥಿತಿಗತಿಗಳು ....ಮೊದಲಾದ ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸಿ, ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ದಾಖಲಿಸಿದ ರೀತಿ ಅಪರೂಪದ್ದು.
ತಮ್ಮ ಈ ಪ್ರಥಮ ಕಾದಂಬರಿಯ ಬರವಣಿಗೆಯಲ್ಲೇ ಅವರು ಪಕ್ವತೆಯನ್ನು ಸಾಧಿಸಿರುವ ರೀತಿಯು ವಿಸ್ಮಯಕಾರಿಯಾದದ್ದು.
ನಿಸ್ಸಂದೇಹವಾಗಿ ಈ ಕಾದಂಬರಿಯು ಈಚೆಗೆ ಬಂದ ಪ್ರಮುಖ ಕೃತಿಗಳ ಪೈಕಿ ಒಂದು ಎಂದು ಹೇಳಬಹುದು.